Wednesday 27 July 2011

ಕಲಿಗಾಲ




ಪ್ರಪಂಚವೆಂಬ ಸಂತೆಯಲ್ಲಿ
ಲಂಚಕೋರರ ಕಳ್ಳ ಸಂತೆಯಲ್ಲಿ
ಗೋಮುಖ ವ್ಯಾಘ್ರರಂತಿಲ್ಲಿ
ಮುಖವಾಡವ ಧರಿಸಿದರಿಲ್ಲಿ
ಬಾಳುವಿರಿ ಹಾಯಾಗಿ ನೀವಿಲ್ಲಿ :
ನ್ಯಾಯಕ್ಕೆ ಕಾಲವಲ್ಲವಿ ಕಲಿಗಾಲವು
ಅನ್ಯಾಯಕಿಹ ಬೆಲೆ ನ್ಯಾಯಕ್ಕಿಲ್ಲವು;
ಸತ್ಯ ಧರ್ಮ ನ್ಯಾಯಗಳೆಲ್ಲ
ಗೋಮುಖ ವ್ಯಾಘ್ರರ ಕಾಲ ಮೆಟ್ಟುಗಲಾಗಿಹವು 
ಅಂದು ಪುಣ್ಯಕೋಟಿ ನುಡಿಯಿತು
ಸತ್ಯವೇ ನಮ್ಮ ತಾಯಿ -ತಂದೆ
ಬಂಧು-ಬಳಗ ಸಕಲವೂ ಎಂದು
ಸತ್ಯ ವಾಕ್ಯಕೆ ತಪ್ಪಿ ನಡೆದರೆ
ಪರಮಾತ್ಮ ಮೆಚ್ಚನೆಂದು
ಪುಣ್ಯಕೋಟಿಯ ಮಾತು ಕೇಳಿ
ಅದರ ಸತ್ಯ ಸಂಧತೆಗೆ ಮೆಚ್ಚಿ
ಹುಲಿಯೇ ಪ್ರಾಣಾರ್ಪಣೆ ಮಾಡಿಕೊಂಡಿತು
ಆದರಿಂದು ಪುಣ್ಯ ಕೋಟಿಯಂಥ 
ಸತ್ಯ ಸಂಧರಿಗೆ ಸಿಗುತಿರುವ ಬೆಲೆ ?

No comments:

Post a Comment