Wednesday 27 July 2011

ಭೂದೇವಿಗೆ ನನ್ನ ನಮನ

'ಭೂದೇವಿ ನೀನು ಕ್ಷಮಯಾಧರಿತ್ರಿ '



ಕೋಟಿ ಕೋಟಿ ಜೀವಿಗಳ ಹೊತ್ತು ನಿಂತಿಹ ಭೂದೇವಿಯೇ
ನೀನೇನೋ ಕ್ಷಮಯಾಧರಿತ್ರಿ
ನಿನ್ನ ತಾಳ್ಮೆಗೆ ಸರಿಯಲ್ಲ ಈ ಇಳೆಯು
ಪಾಪಿ ಮನುಜರ ಪಾಪದ ಕೊಡ ತುಂಬಿ ತುಳುಕುತಿದೆ:

ನೀನೇನೋ ಕ್ಷಮಯಾಧರಿತ್ರಿ ಎಂದು
ಮಾಡುವುದೇ ಪಾಪವ ಇಷ್ಟೊಂದು?
ತಾವೇನು ಮದುಥಿರುವೆವು ಎಂಬ ಅರಿವು
ಈ ಪಾಪಿ ಮನುಜರಿಗೆ ಇಲ್ಲವು !

ಮೂಕ ಪ್ರಾಣಿಗಳಿಗೆ ಕೊಡುವ ಹಿಂಸೆ ಏನು
ದೀನ ದಲಿತರಿಗೆ ಕೊಡುವ ನೋವೇನು ?
ಮೇಲು ಕೀಳು ಎಂಬ ಭೇದವೇನು?
ನಾನು ತಾನು ಎಂಬ ಅಹಂ ಏನು?
ಅವರ ತಪ್ಪಿಗೆ ಶಿಕ್ಷೆಯೇ ಇಲ್ಲವೇ?

ನೀನೇನೋ ಕ್ಷಮಯಾಧರಿತ್ರಿ ಎಂದು
ಮಾಡುವುದೇ ಪಾಪವ ಇಷ್ಟೊಂದು?
ನಿನ್ನ ತಾಳ್ಮೆಗೆ ಸರಿಯಲ್ಲ ಈ ಇಳೆಯು
ಹೇ ಭೂದೇವಿ ನಿನಗೆ ಇದೋ ನನ್ನ ನಮನ
 

No comments:

Post a Comment