Wednesday 27 July 2011

ಕಲ್ಪನಾಲಹರಿ



ನಾನೊಂದು ಎಣಿಸಿದರೆ ದೈವದೆಣಿಕೆ ಬೇರೆಯೇ ಆಗಿತ್ತು!
ನನ್ನೆಣಿಕೆ ಹೀಗಿತ್ತು!
ನಾನೂ ನಾಟ್ಯ ರಾಣಿ ಶಾಂತಲೆ ಯಂತಾಗಬೇಕು
...ಗೆಜ್ಜೆ ಕಟ್ಟಿ ಕೊಂಡು ನವಿಲಿನಂತೆ ನರ್ತಿಸಿ
ಪ್ರೇಕ್ಷಕರಿಂದ ಬಿರುದು ಬಾವಲಿಗಳನ್ನು ಪಡೆದು
ಅವರ ಹೃನ್ಮನ ಗಳನ್ನೂ ಸೂರೆ ಗೊಳ್ಳಬೇಕು ಎಂದಿದ್ದೆ
ಆದರೆ ನನ್ನೆಣಿಕೆ ಹುಸಿಯಾಯಿತು !
ನಾನೂ ಶ್ರೇಷ್ಠ ಲೇಖಕಿ ತ್ರಿವೇಣಿ ಯವರಂತೆ ಆಗಬೇಕು
ಕಥೆ ಕಾದಂಬರಿ ಗಳನ್ನೂ ರಚಿಸಿ
ಓದುಗರನ್ನು ನನ್ನ ಕಲ್ಪನೆಯ ಕಡಲಲ್ಲಿ ಮುಳುಗಿಸಿ
ಅವರ ಹೃನ್ಮನ ಗಳನ್ನೂ ಸೂರೆ ಗೊಳ್ಳಬೇಕು ಎಂದಿದ್ದೆ
ಆದರೆ ನನ್ನೆಣಿಕೆ ಹುಸಿಯಾಯಿತು !
ನಾನೂ ಗಾಯನ ವಿಧೂಷಿ ಎಂ ಎಸ್ ಸುಬ್ಬಲಕ್ಷ್ಮಿ ಯವರಂತೆ ಆಗಬೇಕು
ನನ್ನ ಇನಿದಾದ ಕಂಠ ದಿಂದ ಹಾಡಿ
ಕೇಳುಗರನ್ನು ನನ್ನ ಸಂಗೀತದ ಸರೋವರದಲ್ಲಿ ತೇಲಿಸಿ
ಅವರ ಹೃನ್ಮನ ಗಳನ್ನೂ ಸೂರೆ ಗೊಳ್ಳಬೇಕು ಎಂದಿದ್ದೆ
ಆದರೆ ನನ್ನೆಣಿಕೆ ಹುಸಿಯಾಯಿತು !
 

No comments:

Post a Comment