Monday 25 March 2013





ಹಾಳೆ - ಮೂರು :

ಒಮ್ಮೆ ಹೀಗೊಂದು ದಿನ ಲೈಬ್ರರಿ ಇಂದ ತಂದ 'ಸಣ್ಣ ಕಥೆಗಳ ಸಂಕಲನ' ಮನೆ ಇಂದ ಶಾಲೆಗೆ ಹೋಗುವ ದಾರಿಯಲ್ಲಿ ಓದುತ್ತ ನಡೆಯುತ್ತಿದ್ದೆ .  ಪುಸ್ತಕದಲ್ಲಿ ಹುದುಗಿ ಹೋಗಿದ್ದ ನನಗೆ ಯಾವುದರ ಪರಿವೆ ಇಲ್ಲದೆ ಪುಸ್ತಕ ಹಿಂತಿರುಗಿಸುವ ದಿನವಾದದರಿಂದ  ಓದಿ ಮುಗಿಸಲೇ ಬೇಕು ಎಂಬ ಛಲ ಇತ್ತು ಹಾಗಾಗಿ ಓದುತ್ತ ಸಾಗಿದ್ದೆ.  ೨-೩ ಕಿ. ಮಿ.  ದಾರಿ ಸವೆಯ ಬೇಕಿತ್ತು.  ಓದುತ್ತ ಓದುತ್ತ ಒಂದು ತೆರೆದ ಒಳ ಚರಂಡಿಗೆ ದೊಪ್ಪನೆ ಬಿದ್ದೆ ನೋಡಿ ; ಒಳ್ಳೆ ಪ್ರಪಾತಕ್ಕೆ ಬಿದ್ದ ಅನುಭವ!!   ನಾನು ಅಪ್ಪ ದೇವರೆ ಈ ಕಂದಕದಿಂದ ಹೊರ ಬರುವಂತೆ ಮಾಡು ನಿನಗೆ ೧೦೧  ನಮಸ್ಕಾರ ಹಾಕುತ್ತೆನೆ.  ಜೊತೆಗೆ ಹೆಜ್ಜೆ ನಮಸ್ಕಾರ, ೧ ೦ ೧  ಬಾರಿ  
' ಓಂ ಶ್ರೀ ಗಣೇಶಾಯ ನಮಃ '   ಎಂದು ಭಕ್ತಿ ಇಂದ ಬರೆಯುತ್ತೇನೆ ಎಂದು ಹರಸಿಕೊಂಡೆ.  ಯಾರಾದ್ರು ಕಾಪಾಡಿ ಎಂದು ಅರಚಿ ಅರಚಿ  ಗಂಟಲ್ಲೆಲ್ಲ ಒಣಗಿ ಹೋಗಿ ನೀರು ಕುಡಿಯಬೇಕೆನಿಸಿತು.  ಸುಮಾರು ತಾಸುಗಳೇ ಕಳೆದು ಹೋದವು .  ಕೊನೆಗೆ ಒಬ್ಬರು ವಯಸ್ಸಾದ ತಾತ  ಒಂದು ಹಗ್ಗವನ್ನು ಇಳಿ  ಬಿಟ್ಟು ಅದನ್ನು ಗಟ್ಟಿಯಾಗಿ ಹಿಡಿದು ಕೊಳ್ಳುವಂತೆ ಹೇಳಿದರು.  ಅವರ ಆ ಸಹಾಯ ನಾನು ಈಗಲೂ ಸ್ಮರಿಸುತ್ತೇನೆ.  ಕೊನೆಗೆ ಮೇಲೆ ಬಂದ ಮೇಲೆ ಯುನಿಫಾರ್ಮ್ ಎಲ್ಲ ಕೊಳೆಯಾಗಿತ್ತು .  ಇನ್ನು ಶಾಲೆಗೆ ಹೋಗುವುದರಲ್ಲಿ ಅರ್ಥ ಇಲ್ಲ ಎಂದು ಮನೆಗೆ ಓಡಿದೆ.  ಮನೆಗೆ ಹೋಗಿ ಅಮ್ಮನಿಗೆ ನಡೆದ ವಿಚಾರ ಎಲ್ಲ ವಿವರಿಸಿದೆ.  ಅಮ್ಮ ಬಿಸಿ ಬಿಸಿ ನೀರು ಹಂಡೆ ಇಂದ ಮೊಗೆದು ಮೊಗೆದೂ  ಸುರಿದರು.  ಮನಸ್ಸು ದೇಹ ಎಲ್ಲ ಹಾಯೆನಿಸಿತು.  ಮತ್ತೆಂದೂ ನಾನು ದಾರಿಯಲ್ಲಿ ಪುಸ್ತಕ ಓದುವ ಸಾಹಸ ಮಾಡಲಿಲ್ಲ!!!!!!!


ಮುಂದುವರಿಯುವುದು ...................   


2 comments:

  1. ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನೇ ಮಾಡಬೇಕೋ ಅದನ್ನೇ ಮಾಡಬೇಕೆಂದು ನೀತಿ ಹೇಳುವ ಕಥನ...

    ReplyDelete
  2. ನಿಮಗೆ ನನ್ನ ಪ್ರೀತಿ ಪೂರ್ವಕ ವಂದನೆಗಳು

    ReplyDelete