Tuesday 6 August 2013


ಕಲ್ಪನಾ ಲಹರಿ

 


                   ನಾನೊಂದು ಎಣಿಸಿದರೆ ದೈವದೆಣಿಕೆ ಬೇರೆಯೇ ಆಗಿತ್ತು! ! !
ನನ್ನೆಣಿಕೆ ಹೀಗಿತ್ತು .....................!!!
ನಾನೂ ''ನಾಟ್ಯ ರಾಣಿ ಶಾಂತಲೆ'' ಯಂತಾಗಬೇಕು
...ಗೆಜ್ಜೆ ಕಟ್ಟಿ ಕೊಂಡು ನವಿಲಿನಂತೆ ನರ್ತಿಸಿ
ಪ್ರೇಕ್ಷಕರಿಂದ ಬಿರುದು ಬಾವಲಿಗಳನ್ನು ಪಡೆದು
ಅವರ ಹೃನ್ಮನ ಗಳನ್ನೂ ಸೂರೆ ಗೊಳ್ಳಬೇಕು ಎಂದಿದ್ದೆ
ಆದರೆ ನನ್ನೆಣಿಕೆ ಹುಸಿಯಾಯಿತು !


ನಾನೂ ಶ್ರೇಷ್ಠ ಲೇಖಕಿ 'ತ್ರಿವೇಣಿ' ಯವರಂತೆ ಆಗಬೇಕು
ಕಥೆ ಕಾದಂಬರಿ ಗಳನ್ನೂ ರಚಿಸಿ
ಓದುಗರನ್ನು ನನ್ನ ಕಲ್ಪನೆಯ ಕಡಲಲ್ಲಿ ಮುಳುಗಿಸಿ
ಅವರ ಹೃನ್ಮನ ಗಳನ್ನೂ ಸೂರೆ ಗೊಳ್ಳಬೇಕು ಎಂದಿದ್ದೆ
ಆದರೆ ನನ್ನೆಣಿಕೆ ಹುಸಿಯಾಯಿತು !

ನಾನೂ ''ಗಾಯನ ವಿಧೂಷಿ ಎಂ ಎಸ್ ಸುಬ್ಬಲಕ್ಷ್ಮಿ' ಯವರಂತೆ ಆಗಬೇಕು
ನನ್ನ ಇನಿದಾದ ಕಂಠ ದಿಂದ ಹಾಡಿ
ಕೇಳುಗರನ್ನು ನನ್ನ ಸಂಗೀತದ ಸರೋವರದಲ್ಲಿ ತೇಲಿಸಿ
ಅವರ ಹೃನ್ಮನ ಗಳನ್ನೂ ಸೂರೆ ಗೊಳ್ಳಬೇಕು ಎಂದಿದ್ದೆ
ಆದರೆ ನನ್ನೆಣಿಕೆ ಹುಸಿಯಾಯಿತು !
ಉಮಾ ಪ್ರಕಾಶ್

No comments:

Post a Comment